ಟೊಯೋಟ ಸಂಸ್ಥೆಯಲ್ಲಿ ಸ್ಥಳೀಯರಿಗೆ ಉದ್ಯೋಗ: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2018-08-27 15:03 GMT

ಬೆಂಗಳೂರು, ಆ.27: ಟೊಯೋಟಾ ಕಿರ್ಲೋಸ್ಕರ್ ಸಂಸ್ಥೆಯಲ್ಲಿ ಸ್ಥಳೀಯರಿಗೆ ಉದ್ಯೋಗ ಅವಕಾಶ ನೀಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್‌ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಕಿಟೋತಚಿಬಾನ ಹಾಗೂ ನಿರ್ದೇಶಕ ಮತ್ತು ಉಪಾಧ್ಯಕ್ಷ ಶೇಖರ್ ವಿಶ್ವನಾಥ್ ತಮ್ಮನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಈ ಮಾತನ್ನು ಹೇಳಿದರು.

ವಾಹನಗಳ ಮೇಲಿನ ತೆರಿಗೆ ವೆಚ್ಚ ಶೇ.43ರಷ್ಟು ಹೆಚ್ಚಿಸಲಾಗಿದ್ದು, ಜಿಎಸ್‌ಟಿ ಕಡಿಮೆ ಮಾಡಿಸುವಂತೆ ಸಂಸ್ಥೆಯ ನಿರ್ದೇಶಕರು ಮನವಿ ಮಾಡಿದರು. ಈ ಬಗ್ಗೆ ಮನವಿ ಸಲ್ಲಿಸಿದ್ದಲ್ಲಿ ಕೇಂದ್ರ ಸರಕಾರದ ಜೊತೆ ಚರ್ಚಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News