ಆ.29ಕ್ಕೆ ಪುಸ್ತಕ ಪ್ರಾಧಿಕಾರದ ಬೆಳ್ಳಿಹಬ್ಬ

Update: 2018-08-27 16:12 GMT

ಬೆಂಗಳೂರು, ಆ. 27: ಕನ್ನಡ ಪುಸ್ತಕ ಪ್ರಾಧಿಕಾರವು ಆ.29ರ ಬುಧವಾರದಂದು ಬೆಳಗ್ಗೆ 11ಗಂಟೆಗೆ ಬೆಳ್ಳಿ ಹಬ್ಬ ಕಾರ್ಯಕ್ರಮವನ್ನು ನಗರದ ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಇಲ್ಲಿ ಏರ್ಪಡಿಸಲಾಗಿದೆ.

ಸಮಾರಂಭದ ಉದ್ಫಾಟನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲ ನೆರವೇರಿಸಲಿದ್ದು, ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್.ಆರ್.ವಿಶುಕುಮಾರ್ ಪಾಲ್ಗೊಳ್ಳಲಿದ್ದಾರೆ. ಪುಸ್ತಕ ಪ್ರಾಧಿಕಾರದ ಅಧ್ಯಕ್ಷ್ಷೆ ಡಾ. ವಸುಂಧರಾ ಭೂಪತಿ ಅಧ್ಯಕ್ಷತೆ ವಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News