ಸಿದ್ದರಾಮಯ್ಯ ಜನಪರ ನಾಯಕ: ಮಾಜಿ ಶಾಸಕ ಬಿ.ಆರ್.ಪಾಟೀಲ್

Update: 2018-08-28 13:48 GMT

ಕಲಬುರ್ಗಿ, ಆ.28: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯಲ್ಲಿ ಜನಪರವಾಗಿ ಕೆಲಸ ಮಾಡಿದ ನಾಯಕ. ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದಾದರೆ ತಪ್ಪೇನು ಎಂದು ಮಾಜಿ ಶಾಸಕ ಬಿ.ಆರ್.ಪಾಟೀಲ್ ಪ್ರಶ್ನಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಬಯಸಿದರೆ ಸಿದ್ದರಾಮಯ್ಯ ಮತ್ತೆ ಈ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ. ಆದರೆ, ಹಾಲಿ ಮುಖ್ಯಮಂತ್ರಿ ಕುಮಾರಸ್ವಾಮಿಯನ್ನು ಅಧಿಕಾರದಿಂದ ಕೆಳಗಿಳಿಸಿ ಅವರು ಅಧಿಕಾರದ ಗದ್ದುಗೆ ಏರುವುದಿಲ್ಲ ಎಂದರು.

ಲೋಕಾಭಿರಾಮವಾಗಿ ವೇದಿಕೆಯಲ್ಲಿ ಭಾಷಣ ಮಾಡುವಾಗ ಅವರು, ಜನರ ಮನವಿಯನ್ನು ಬೆಂಬಲಿಸಿ ತಾವು ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದಾಗಿ ಹೇಳಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ತಿಳಿಸಿದರು.

ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯಲ್ಲಿ ಮಾಡಿರುವ ಜನಪರವಾದ ಕೆಲಸಗಳೇ ಅವರನ್ನು ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ಮಾಡಿದರೆ ಅಚ್ಚರಿ ಪಡಬೇಕಿಲ್ಲ ಎಂದು ಬಿ.ಆರ್.ಪಾಟೀಲ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News