ಸಾಲ ಸೌಲಭ್ಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಗೆ ಜೆಡಿಎಸ್ ಮನವಿ
Update: 2018-08-29 11:05 GMT
ಮಡಿಕೇರಿ ಆ.29 : ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮವು ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ನಿಗಧಿ ಪಡಿಸಿದ್ದ ಆ.31 ರ ಕಡೇ ದಿನಾಂಕವನ್ನು ಕೊಡಗಿನ ಪ್ರಸ್ತುತ ಪ್ರತಿಕೂಲ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮುಂದೂಡುವಂತೆ ಜಾತ್ಯಾತೀತ ಜನತಾದಳದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಪೋಕ್ಲುವಿನ ಎಂ.ಎ.ಮನ್ಸೂರ್ ಆಲಿ ಸರಕಾರವನ್ನು ಕೋರಿದ್ದಾರೆ.
ಇತ್ತೀಚೆಗೆ ಕೊಡಗಿನಲ್ಲಿ ಉಂಟಾದ ಭೂ ಕುಸಿತ, ಸಾವು ನೋವು, ಕಷ್ಟ, ನಷ್ಟಗಳಿಂದ ಜನಜೀವನವೇ ಅಸ್ತವ್ಯಸ್ಥಗೊಂಡಿದ್ದು, ಸಂಪರ್ಕ ಕೂಡ ಸಾಧ್ಯವಿಲ್ಲದೆ ಜನರು ಸಂಕಷ್ಟಕೀಡಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸರಕಾರ ಗೊತ್ತುಪಡಿಸಿರುವ ದಿನಾಂಕದೊಳಗೆ ಅರ್ಹರು ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅಸಾಧ್ಯವಾಗಿರುವುದರಿಂದ ಅರ್ಜಿ ಸ್ವೀಕಾರದ ದಿನಾಂಕವನ್ನು ಹದಿನೈದು ದಿನಗಳ ಮಟ್ಟಿಗೆ ಮುಂದೂಡುವಂತೆ ಮನ್ಸೂರ್ ಮನವಿ ಮಾಡಿದ್ದಾರೆ.