ಎರ್ಮಾಳು: ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ

Update: 2018-08-29 18:04 GMT

ಪಡುಬಿದ್ರೆ, ಆ. 29: ಯುವಕನೋರ್ವನ ಮೃತದೇಹ ಎರ್ಮಾಳು ಪೂಂದಾಡುವಿನ ರೈಲ್ವೇ ಮೇಲ್ಸೇತುವೆಯ ಹಳಿಯಲ್ಲಿ ಬುಧವಾರ ಬೆಳಗ್ಗೆ ಪತ್ತೆಯಾಗಿದ್ದು, ಈ ಬಗ್ಗೆ ಸಂಶಯಕ್ಕೆ ಕಾರಣವಾಗಿದೆ.

ಮರದ ಕೆಲಸ ಮಾಡಿಕೊಳ್ಳುತಿದ್ದ ಪೂಂದಾಡುವಿನ ನಿವಾಸಿ ಸುಬ್ರಹ್ಮಣ್ಯ ಆಚಾರ್ಯ (28) ಎಂಬವರ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಇತ್ತೀಚೆಗೆ ನಡೆದ ಅಪಘಾತವೊಂದರಲ್ಲಿ ಗಾಯಗೊಂಡು ನಡೆದಾಡದಂತಹ ಸ್ಥಿತಿಯಲ್ಲಿ ಮನೆಯಲ್ಲಿದ್ದರು ಎಂದ ಹೇಳಲಾಗಿದೆ.

ಈ ಬಗ್ಗೆ ಪಡುಬಿದ್ರೆ ಠಾಣೆಗೆ ದೂರು ನೀಡಿರುವ ಸಹೋದರ ಸದಾನಂದ ಆಚಾರ್ಯ ಸಾವಿನ ಕುರಿತು ಸಂಶಯ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿ ಕೊಂಡಿರುವ ಪೊಲೀಸರು ತನಿಖೆ ನಡೆಸುತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News