ಸರಗಳ್ಳತನ ಪ್ರಕರಣ: ಆರೋಪಿ ಬಂಧನ

Update: 2018-08-29 16:12 GMT

ಬೆಂಗಳೂರು, ಆ.29: ಸರಗಳ್ಳತನ ಮಾಡುತ್ತಿದ್ದ ಆರೋಪಿದಡಿ ವ್ಯಕ್ತಿಯೊಬ್ಬನನ್ನು ಬೆಂಗಳೂರು ಈಶಾನ್ಯ ವಿಭಾಗದ ಪೋಲಿಸರು ಬಂಧಿಸಿದ್ದಾರೆ. ಚಿಂತಾಮಣಿ ತಾಲೂಕು ದಂಡುಪಾಳ್ಯದ ನಿವಾಸಿ ವೆಂಕಟಸ್ವಾಮಿ ಎಂಬಾತ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಕೆಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ಸುಮಾರು 3 ಲಕ್ಷ ಮೌಲ್ಯದ 9 ಬೈಕ್‌ಗಳನ್ನು ಕಳವು ಮಾಡಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

ಕೊತ್ತನೂರು-ಅಮೃತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ನಡೆಸಿದ್ದ ಎಂದು ತಿಳಿದು ಬಂದಿದೆ. ಬಂಧಿತನಿಂದ ಪೊಲೀಸರು 75 ಗ್ರಾಂ ತೂಕದ 1 ಲಕ್ಷದ 75 ಸಾವಿರ ಮೌಲ್ಯದ ಎರಡು ಚಿನ್ನದ ಸರ ಜಪ್ತಿ ಮಾಡಿ ತನಿಖೆ ಮುಂದುವರೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News