ಇಂದು ತಡರಾತ್ರಿ ದೆಹಲಿಗೆ ತೆರಳಲಿರುವ ಸಿಎಂ ಕುಮಾರಸ್ವಾಮಿ

Update: 2018-08-29 17:58 GMT

ಬೆಂಗಳೂರು,ಆ.29: ಇಂದು ತಡರಾತ್ರಿ ಸಿಎಂ ಕುಮಾರಸ್ವಾಮಿ ದೆಹಲಿಗೆ ತೆರಳಲಿದ್ದು, ನಾಳೆ ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗ್ಗೆ 9:30ಕ್ಕೆ ರಾಹುಲ್ ಗಾಂಧಿ ಭೇಟಿಗೆ ಸಮಯ ನಿಗದಿಯಾಗಿದ್ದು, ಮೈತ್ರಿ ಸರಕಾರದ ಇತ್ತೀಚಿನ ರಾಜಕೀಯ ಬೆಳವಣಿಗೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಸಚಿವ ಸಂಪುಟ ವಿಸ್ತರಣೆ & ನಿಗಮ ಮಂಡಳಿ ನೇಮಕದ ಬಗ್ಗೆ ಮಾತುಕತೆ ನಡೆಸಲಿದ್ದು, ಸಿದ್ದರಾಮಯ್ಯ ಮತ್ತೆ ಸಿಎಂ ವಿಚಾರ ಪ್ರಸ್ತಾಪಿಸಲಿದ್ದಾರೆ ಎನ್ನಲಾಗಿದೆ.

ಮದ್ಯಾಹ್ನ 12 ಗಂಟೆಗೆ ಸಚಿವ ಜಿತೇಂದ್ರ ಸಿಂಗ್, 4 ಗಂಟೆಗೆ ಗೃಹ ಸಚಿವ ರಾಜನಾಥ್ ಸಿಂಗ್ ಭೇಟಿಯಾಗಲಿದ್ದು, ಕೊಡಗಿನ ಅತಿವೃಷ್ಟಿಗೆ ಪರಿಹಾರ ಕೇಳಲಿದ್ದಾರೆ. ಕೊಡಗಿನ ಅತಿವೃಷ್ಟಿಗೆ ಈಗಾಗಲೇ 3 ಸಾವಿರ ಕೋಟಿ ರೂ. ಪರಿಹಾರ ಕೇಳಲು ವರದಿ ಸಿದ್ಧಪಡಿಸಿದ್ದು, ಕೇಂದ್ರ ಗೃಹ ಸಚಿವರ ಭೇಟಿ ಬಳಿಕ ಪರಿಹಾರ ಮೊತ್ತ ನಿಗದಿಯಾಗಲಿದೆ.

ಮಧ್ಯಾಹ್ನ 1 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೊವಿಂದ್ ರನ್ನು ಭೇಟಿಯಾಗಲಿರುವ ಸಿಎಂ ಕುಮಾರಸ್ವಾಮಿ, ಖುಣಮುಕ್ತ ಪತ್ರ ನೀಡಲು ಸುಗ್ರೀವಾಜ್ಞೆಗೆ ಸಹಿ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News