ಋಣಭಾರ ಪೀಡಿತರಿಗೆ ಕಿರುಕುಳ ತಡೆಯಲು ರಾಜ್ಯ ಸರಕಾರ ಸೂಚನೆ

Update: 2018-08-30 15:33 GMT

ಬೆಂಗಳೂರು, ಆ.30: ಋಣಭಾರ ಪೀಡಿತ ಸಣ್ಣ ರೈತರು, ದುರ್ಬಲ ವರ್ಗದವರಿಗೆ ಲೇವಾದೇವಿದಾರರು ಕಿರುಕುಳ ನೀಡದಂತೆ ಕ್ರಮ ವಹಿಸಲು ಎಲ್ಲ ಪ್ರಾದೇಶಿಕ ಆಯುಕ್ತರು, ಎಲ್ಲ ವಲಯಗಳ ಪೊಲೀಸ್ ಮಹಾನಿರೀಕ್ಷಕರು, ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ರಾಜ್ಯ ಸರಕಾರ ಸೂಚಿಸಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೂಚನೆಯ ಮೇರೆಗೆ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.

ಕರ್ನಾಟಕ ಋಣಭಾರ ಪರಿಹಾರ ಮಸೂದೆ 2018 ನ್ನು ರಾಜ್ಯದಲ್ಲಿನ ಋಣಭಾರ ಪೀಡಿತ ಸಣ್ಣರೈತರಿಗೆ ಭೂರಹಿತ ರೈತ ಕೃಷಿ ಕಾರ್ಮಿಕರಿಗೆ ಹಾಗೂ ದುರ್ಬಲ ವರ್ಗದ ಜನರಿಗೆ ಋಣಭಾರದ ಸಮಸ್ಯೆಗಳ ಪರಿಹಾರಕ್ಕಾಗಿ ಮಂಡಿಸಲು ಪರಿಶೀಲಿಸಲಾಗುತ್ತಿದೆ. ಈ ಮಾಹಿತಿಯು ರಾಜ್ಯದ ಹಲವಾರು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಋಣಭಾರ ಪೀಡಿತ ಸಣ್ಣರೈತರಿಗೆ ಭೂರಹಿತ ರೈತ ಕೃಷಿ ಕಾರ್ಮಿಕರಿಗೆ ಹಾಗೂ ದುರ್ಬಲ ವರ್ಗದ ಜನರಿಗೆ ಸಾಲ ನೀಡಿದರೆನ್ನಲಾದ ಲೇವಾದೇವಿಗಾರರಿಂದ ಸಾಲ ಪಡೆದವರ ಮೇಲೆ ವಿವಿಧ ರೀತಿಯ ಕಾನೂನುಬಾಹಿರ ಒತ್ತಡಗಳು ವರದಿಯಾಗುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ಕೂಡಲೆ ಈ ಸಾಲ ಪಡೆದವರ ಮೇಲೆ ಯಾವುದೇ ರೀತಿಯ ಕಾನೂನುಬಾಹಿರ ಒತ್ತಡ ಹಾಕದಂತೆ, ದೌರ್ಜನ್ಯ ಎಸಗದಂತೆ ತಡೆಗಟ್ಟಲು ಕಾನೂನು ರೀತ್ಯ ಸೂಕ್ತ ಕ್ರಮ ಜರುಗಿಸುವಂತೆ ಈ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News