ರಾಷ್ಟ್ರಪತಿ ರಾಮನಾಥ್ ಕೋವಿಂದ್ ರನ್ನು ಭೇಟಿಯಾದ ಕುಮಾರಸ್ವಾಮಿ

Update: 2018-08-30 09:07 GMT

ಹೊಸದಿಲ್ಲಿ, ಆ.30: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಇಂದು ಸಿಎಂ ಕುಮಾರಸ್ವಾಮಿ ದಿಲ್ಲಿಗೆ ತೆರಳಿದ್ದಾರೆ. ಈ ಸಂದರ್ಭ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದ ಕುಮಾರಸ್ವಾಮಿ, ಋಣಮುಕ್ತ ಪರಿಹಾರ ತಿದ್ದುಪಡಿ ಕಾಯ್ದೆ ಜಾರಿ ಹಿನ್ನೆಲೆಯಲ್ಲಿ ಈ ಬಗ್ಗೆ ಮಾತುಕತೆ ನಡೆಸಿದರು. ಈ ಬಗೆಗಿನ ಸುಗ್ರೀವಾಜ್ಞೆಗೆ ಸಮ್ಮತಿಗೆ ಅವರು ರಾಷ್ಟ್ರಪತಿಗಳಲ್ಲಿ ಮನವಿ ಮಾಡಿದರು.

ಇದೇ ಸಂದರ್ಭ ಅವರು ಕೇಂದ್ರ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರನ್ನೂ ಭೇಟಿಯಾದರು. ಕರ್ನಾಟಕದ ಪ್ರವಾಹ ಮತ್ತು ಬರ ಪರಿಸ್ಥಿತಿಯ ಬಗ್ಗೆ ಕುಮಾರಸ್ವಾಮಿ ಸಚಿವರಿಗೆ ವಿವರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News