ಕೊಡಗು ಮಳೆಹಾನಿ: ನೆರವಿಗಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಗೆ ಮನವಿ
Update: 2018-08-31 11:56 GMT
ಮಡಿಕೇರಿ, ಆ.31: ಕಳೆದ ತಿಂಗಳಿನಲ್ಲಿ ಬಿದ್ದ ಮಳೆ ಹಾನಿ ಕುರಿತಂತೆ, ರಸ್ತೆ, ಸೇತುವೆ ಕಾಮಗಾರಿಗಳನ್ನು ಹಾಗೂ ಉಳಿದ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ಅನುಕೂಲವಾಗುವಂತೆ ಕರ್ನಾಟಕ ರಾಜ್ಯದ ಎಲ್ಲಾ ವಿಧಾನ ಪರಿಷತ್ತಿನ ಸದಸ್ಯರುಗಳಿಂದ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ತಲಾ 25 ಲಕ್ಷಗಳನ್ನು ಅವಿವೃಷ್ಟಿ ಹಾನಿ ಪ್ರದೇಶ ಕೊಡಗು ಜಿಲ್ಲೆಗೆ ನೀಡುವಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಲ್ಲಿ ಎಂಎಲ್ಸಿ ಸುನಿಲ್ ಸುಬ್ರಮಣಿ ಮನವಿ ಮಾಡಿದರು.