ತುಮಕೂರು: ತೋಟದ ಮನೆ ದರೋಡೆ; ಆರೋಪಿಗಳ ಬಂಧನ

Update: 2018-08-31 16:37 GMT

ತುಮಕೂರು,ಆ.31: ಚಿಕ್ಕನಾಯಕನಹಳ್ಳಿ ತಾಲೂಕು ಹಂದನಕೆರೆ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ನಡೆದ ತೋಟದ ಮನೆಯೊಂದರ ದರೋಡೆಗೆ ಸಂಬಂಧಿಸಿದಂತೆ ಹುಳಿಯಾರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಸುಮಾರು 1.50 ಲಕ್ಷ ರೂ ಬೆಲೆ ಬಾಳುವ 55ಗ್ರಾಂ ತೂಕದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಮುನಿಯಾನಾಯ್ಕ್ (26), ಎಂ.ಎಸ್ ಯೋಗೀಶ್ (23) ಎಂದು ಗುರುತಿಸಲಾಗಿದೆ. ಇವರಿಂದ ಕೃತ್ಯಕ್ಕೆ ಬಳಸಿದ ಫಲ್ಸರ್ ಬೈಕ್ ಹಾಗೂ 1,66,400 ರೂ ಬೆಲೆ 55 ಗ್ರಾಂ ತೂಕದ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ. ದರೋಡೆ ಪ್ರಕರಣವನ್ನು ಪತ್ತೆ ಹೆಚ್ಚಿದ ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ದಿವ್ಯ ಗೋಪಿನಾಥ್ ಅಭಿನಂದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News