ಪಾನಮತ್ತನಾಗಿ ಕಾರು ನುಗ್ಗಿಸಿದ ಬಿಜೆಪಿ ನಾಯಕನ ಪುತ್ರ: ಫುಟ್ ಪಾತ್ ನಲ್ಲಿ ಮಲಗಿದ್ದ ಇಬ್ಬರು ಮೃತ್ಯು

Update: 2018-09-01 07:35 GMT

ಜೈಪುರ, ಸೆ.1: ಇಲ್ಲಿ ರಸ್ತೆ ಬದಿ ಮಲಗಿದ್ದ ನಾಲ್ವರು ಕಾರ್ಮಿಕರ ಮೇಲೆ ಕಾರೊಂದು ಹರಿದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಕಾರು ಚಲಾಯಿಸುತ್ತಿದ್ದ ಸ್ಥಳೀಯ ಬಿಜೆಪಿ ನಾಯಕನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.

“ಫುಟ್ ಪಾತ್ ನಲ್ಲಿ ಮಲಗಿದ್ದವರಿಗೆ ಕಾರು ಢಿಕ್ಕಿ ಹೊಡೆದಿತ್ತು. ನಾಲ್ವರು ಗಾಯಗೊಂಡಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ” ಎಂದು ಸ್ಥಳಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಅಪಘಾತ ನಡೆಸಿದ ಬಿಜೆಪಿ ನಾಯಕನ ಪುತ್ರ ಪಾನಮತ್ತನಾಗಿದ್ದ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News