​ಉಡುಪಿ: 43 ಮಂದಿಗೆ ವಿದ್ಯಾರ್ಥಿ ವೇತನ ವಿತರಣೆ

Update: 2018-09-01 12:29 GMT

ಉಡುಪಿ, ಸೆ.1: ಜಮೀಯ್ಯತುಲ್ ಫಲಾಹ್ ದ.ಕ. ಮತ್ತು ಉಡುಪಿ ಜಿಲ್ಲೆ ಇದರ ಉಡುಪಿ ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಶನಿವಾರ ಉಡುಪಿ ಜಾಮೀಯ ಮಸೀದಿಯ ಸಭಾಂಗಣದಲ್ಲಿ ಜರಗಿತು.

ಉಡುಪಿ ತಾಲೂಕಿನ ಅರ್ಹ 43 ಮಂದಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.

ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಉಡುಪಿ ಘಟಕದ ಅಧ್ಯಕ್ಷ ಖತೀಬ್ ಅಬ್ದುಲ್ ರಶೀದ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ವಕ್ಫ್ ಬೋರ್ಡ್ ಸಲಹಾ ಮಂಡಳಿ ಅಧ್ಯಕ್ಷ ಇಬ್ರಾಹಿಂ ಮಟಪಾಡಿ, ಜಿದ್ದಾ ಎನ್‌ಆರ್‌ಸಿಸಿ ಘಟಕದ ಎಸ್.ಎಂ. ಜಾಫರ್, ಜಮೀಯ್ಯತುಲ್ ಫಲಾಹ್ ಉಡುಪಿ ಘಟಕದ ಉಪಾಧ್ಯಕ್ಷ ಶೇಕ್ ಸಲಾವುದ್ದೀನ್, ಕೋಶಾಧಿಕಾರಿ ಸಮೀರ್ ಅಹ್ಮದ್, ಕಾರ್ಯದರ್ಶಿ ಖಾಸಿಂ ಬಾರಕೂರು ಉಪಸ್ಥಿತರಿದ್ದರು. ಮುಶೀರ್ ಶೇಕ್ ಸ್ವಾಗತಿಸಿದರು. ನಾಸೀರ್ ಕುಕ್ಕಿಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News