ಕೆಸಿಸಿ ಕಪ್: ಭದ್ರತೆ ನೀಡಲು ನಟ ಸುದೀಪ್ ಮನವಿ

Update: 2018-09-01 13:58 GMT

ಬೆಂಗಳೂರು, ಸೆ. 1: ಕರ್ನಾಟಕ ಚಲನಚಿತ್ರ ಕ್ರಿಕೆಟ್ ಕಪ್(ಕೆಸಿಸಿ) ಸೆ.8 ಮತ್ತು 9ರಂದು ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅಗತ್ಯ ಪೊಲೀಸ್ ಭದ್ರತೆ ಕಲ್ಪಿಸಬೇಕೆಂದು ಚಿತ್ರನಟ ಕಿಚ್ಚ ಸುದೀಪ್, ಗೃಹ ಸಚಿವರೂ ಆಗಿರುವ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರಿಗೆ ಮನವಿ ಮಾಡಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿದ ನಟ ಸುದೀಪ್, ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಯಲಿದ್ದು, ಪೊಲೀಸ್ ಇಲಾಖೆಯಿಂದ ಭದ್ರತೆ ಹಾಗೂ ಸಹಕಾರ ನೀಡುವಂತೆ ಕೋರಿದ್ದಾರೆ.

ಇಲಾಖೆ ಕಿಕೆಟ್ ಪಂದ್ಯಕ್ಕೆ ಅಗತ್ಯ ಭದ್ರತೆ ಕಲ್ಪಿಸುವುದರ ಜತೆಗೆ ಎಲ್ಲ ರೀತಿಯ ಸಹಕಾರ ನೀಡುವ ಭರವಸೆ ನೀಡಿದ್ದೇವೆ ಎಂದು ಪರಮೇಶ್ವರ್ ಹೇಳಿದರು. ಪಂದ್ಯಾವಳಿ ದಿನದಂದು ಕೊಡಗು ನೆರೆ ಸಂತ್ರಸ್ತರಿಗೆ ತಂಡದಿಂದ ನೆರವು ನೀಡುವ ಬಗ್ಗೆ ನಟ ಸುದೀಪ್ ನಿರ್ಧಾರವನ್ನು ಪರಮೇಶ್ವರ್ ಶ್ಲಾಘಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News