ನಾನು ಸಿಎಂ ಹುದ್ದೆ ಆಕಾಂಕ್ಷಿಯಲ್ಲ: ಸಚಿವ ದೇಶಪಾಂಡೆ
Update: 2018-09-01 13:59 GMT
ಬೆಂಗಳೂರು, ಸೆ. 1: ದೇವೇಗೌಡರಾಗಲಿ ಅಥವಾ ಕುಮಾರಸ್ವಾಮಿಯವರಾಗಲಿ ಮುಖ್ಯಮಂತ್ರಿ ಹುದ್ದೆಗೆ ನನ್ನ ಹೆಸರನ್ನು ಸೂಚಿಸಿಲ್ಲ. ನಾನು ಅರ್ಹ ಎಂದಷ್ಟೇ ಹೇಳಿದ್ದಾರೆ. ಆದರೆ, ನಾನು ಸಿಎಂ ಹುದ್ದೆ ಆಕಾಂಕ್ಷಿಯಲ್ಲ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಸ್ಪಷ್ಟಪಡಿಸಿದ್ದಾರೆ.
ಶನಿವಾರ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಈ ಹಿಂದೆ ನನಗೂ ಮುಖ್ಯಮಂತ್ರಿ ಆಗುವ ಆಕಾಂಕ್ಷೆ ಇತ್ತು. ಆದರೆ, ಇದೀಗ ನಾನು ಸಿಎಂ ಹುದ್ದೆ ಆಕಾಂಕ್ಷಿಯಲ್ಲ ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟಣೆ ನೀಡಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ ಜನತಾ ದರ್ಶನ ಒಳ್ಳೆಯ ಕಾರ್ಯಕ್ರಮ. ಇಲ್ಲಿಗೆ ಬರುವವರೆಲ್ಲ ಕಷ್ಟಗಳಲ್ಲಿ ಇರುವವರು. ಬಡವರ ಕಷ್ಟಗಳಿಗೆ ಮುಖ್ಯಮಂತ್ರಿ ಸ್ಪಂದಿಸುವಂತೆಯೇ ಅವರಿಗೆ ದೇವರು ಉತ್ತಮ ಆರೋಗ್ಯ ನೀಡಲಿ ಎಂದು ಪ್ರಾರ್ಥಿಸಿದರು.