ಬೆಂಗಳೂರು: ನೇಣು ಬಿಗಿದು ಯುವತಿ ಆತ್ಮಹತ್ಯೆ

Update: 2018-09-01 14:28 GMT

ಬೆಂಗಳೂರು, ಸೆ.1: ಯುವತಿಯೊಬ್ಬಾಕೆ ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಇಲ್ಲಿನ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವರ್ತೂರು ಚರ್ಚ್‌ನಲ್ಲಿ ನೆಲೆಸಿದ್ದ ಕೋಲ್ಕತ್ತಾ ಮೂಲದ ಎಲಿಜಬೆತ್(30) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ನಾಲ್ಕು ತಿಂಗಳ ಹಿಂದೆ ಕೋಲ್ಕತ್ತಾದಿಂದ ಬಂದು ವರ್ತೂರು ಚರ್ಚ್‌ನಲ್ಲಿ ನೆಲೆಸಿದ್ದರು. ಎರಡು ದಿನಗಳ ಹಿಂದೆ ಅವರು ಕಾಣೆಯಾಗಿದ್ದರು. ಶುಕ್ರವಾರ ಸಂಜೆ ವರ್ತೂರು ಕೋಡಿಯ ಮರದ ಕೊಂಬೆಯಲ್ಲಿ ಅವರ ಮೃತದೇಹ ನೇತಾಡುತ್ತಿದ್ದುದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ತಿಳಿಸಿದರು.

ಸ್ಥಳಕ್ಕೆ ಧಾವಿಸಿದ ವೈಟ್‌ಫೀಲ್ಡ್ ವಿಭಾಗದ ಪೊಲೀಸರು ಪರಿಶೀಲಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೈದೇಹಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News