ಬೆಂಗಳೂರು: ವಿದ್ಯಾರ್ಥಿಗೆ ಹಲ್ಲೆ ನಡೆಸಿ ದರೋಡೆ

Update: 2018-09-01 14:30 GMT

ಬೆಂಗಳೂರು, ಸೆ.1: ವಿದ್ಯಾರ್ಥಿಯೊಬ್ಬನನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ ದುಷ್ಕರ್ಮಿಗಳು ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ಇಲ್ಲಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಮಿತ್ ಎಂಬುವರು ಶನಿವಾರ ಬೆಳಗ್ಗೆ ಬೈಕ್‌ನಲ್ಲಿ ನಾರಾಯಣ ಪುರ ರಸ್ತೆ ಮೂಲಕ ಮನೆಗೆ ತೆರಳುವಾಗ ಅಡ್ಡಗಟ್ಟಿದ ದುಷ್ಕರ್ಮಿಗಳು, ಹಲ್ಲೆ ನಡೆಸಿ ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News