×
Ad

ಉಡುಪಿ: ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ದೇಣಿಗೆ

Update: 2018-09-01 21:11 IST

ಉಡುಪಿ, ಸೆ.1: ಉಡುಪಿ ರಾಷ್ಟ್ರೀಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ, ವಿಶ್ವಬ್ರಾಹ್ಮಣ ಯುವಕ ಸೇವಾ ದಳ ಹಾಗೂ ಗಾಯತ್ರಿ ಮಹಿಳಾ ಮಂಡಳಿಯ ವತಿಯಿಂದ ಕೊಡಗಿನ ನೆರೆ ಸಂತ್ರಸ್ತರಿಗೆ ನೆರವಾಗಲು ದೇಣಿಗೆಯನ್ನು ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಮೂಲಕ ನೀಡಲಾಯಿತು.

ಸಂಘದ ಅಧ್ಯಕ್ಷ ದಿವಾಕರ ವಿ.ಆಚಾರ್ಯ, ಕಾರ್ಯದರ್ಶಿ ಸುರೇಶ ಆಚಾರ್ಯ, ಕೋಶಾಧಿಕಾರಿ ಪ್ರಭಾಕರ ಆಚಾರ್ಯ, ಉಪಾಧ್ಯಕ್ಷ ರತ್ನಾಕರ ಆಚಾರ್ಯ, ಉಪಕಾರ್ಯದರ್ಶಿ ಉಮೇಶ್ ಆಚಾರ್ಯ, ಯುವಕ ಸೇವಾ ದಳದ ಅಧ್ಯಕ್ಷ ಸುರೇಶ ಆಚಾರ್ಯ, ಗೌರವಾಧ್ಯಕ್ಷ ದಿವಾಕರ ಆಚಾರ್ಯ, ವಿಶ್ವನಾಥ ಆಚಾರ್ಯ, ಮಹಿಳಾ ಮಂಡಳಿಯ ಅಧ್ಯಕ್ಷೆ ರಾಜೀವಿ ವಿಠ್ಠಲ ಆಚಾರ್ಯ, ಸಂಧ್ಯಾ ಲಕ್ಷ್ಮಣ ಆಚಾರ್ಯ, ವಂದನಾ ಯೋಗೀಶ್ ಆಚಾರ್ಯ, ಶಾಲಿನಿ ಜಯಕರ ಆಚಾರ್ಯ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News