ಕೊರಟಗೆರೆ: ಭೀಕರ ಅಪಘಾತಕ್ಕೆ ಮೂರು ಮಂದಿ ಯುವಕರು ಬಲಿ

Update: 2018-09-02 06:21 GMT

ಕೊರಟಗೆರೆ, ಸೆ. 2: ಇಲ್ಲಿನ ಬೈಪಾಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂರು ಮಂದಿ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.

ಬೆಂಗಳೂರಿನಿಂದ ಕೊರಟಗೆರೆ ಪಟ್ಟಣಕ್ಕೆ ಸ್ನೇಹಿತನ ಮದುವೆಗಾಗಿ ಹೋಗುತ್ತಿದ್ದ ಕೊರಟಗೆರೆ ತಾಲೂಕಿನ ರಾಯವಾರ ಗ್ರಾಮದ ಹಷಿ೯ತ್ ರೆಡ್ಡಿ (24)ಮತ್ತು ದೊಡ್ಡಪಾಲನಹಳ್ಳಿ ಗ್ರಾಮದ ನವೀನಕುಮಾರ್ (22) ಸ್ಥಳದಲ್ಲೇ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಮಧುಗಿರಿ ಮಾರಮ್ಮನ ದೇವಾಲಯಕ್ಕೆ ಹೋಗಿ ಬರುತ್ತಿದ್ದ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ನಂದಿಗಾನಹಳ್ಳಿ ನಿವಾಸಿ ಉಪನ್ಯಾಸಕ ಸೊಮಶೇಖರ್(32) ಗಂಭೀರ ಗಾಯಗೊಂಡು ತುಮಕೂರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟರು ಎಂದು ತಿಳಿದುಬಂದಿದೆ.

ಸಿಪಿಐ ಮುನಿರಾಜು ಮತ್ತು ಪಿಎಸೈ ಮಂಜುನಾಥ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News