ಲೋಕಸಭಾ ಚುನಾವಣೆಯಲ್ಲಿ ಕನ್ಹಯ್ಯ ಕುಮಾರ್ ಸ್ಪರ್ಧೆ

Update: 2018-09-02 09:06 GMT

ಪಾಟ್ನಾ, ಸೆ.2: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಎನ್ ಯುಎಸ್ ಯು ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರು ಬಿಹಾರದ ಬೇಗುಸರಾಯ್ ಕ್ಷೇತ್ರದಿಂದ ಮಹಾಘಟಬಂಧನದ ಸಾಮಾನ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ತೇಜಸ್ವಿ ಪ್ರಸಾದ್ ಯಾದವ್ ಬಿಹಾರದಲ್ಲಿ ಮಹಾಘಟಬಂಧನದೊಂದಿಗೆ ಕೈಜೋಡಿಸಲಿದ್ದಾರೆ ಎನ್ನಲಾಗಿದ್ದು, ಬೇಗುಸರಾಯ್ ಸೀಟನ್ನು ಕನ್ಹಯ್ಯ ಕುಮಾರ್ ರಿಗೆ ಬಿಟ್ಟುಕೊಡಲು ಕಾಂಗ್ರೆಸ್ ನಾಯಕತ್ವ ಒಪ್ಪಿಕೊಂಡಿದೆ ಎನ್ನಲಾಗಿದೆ.

ಸಿಪಿಎಂನಿಂದ ಕನ್ಹಯ್ಯ ಕುಮಾರ್ ಸ್ಪರ್ಧಿಸಲಿದ್ದಾರೆ ಎನ್ನಲಾಗಿದ್ದು, ಮಹಾಘಟಬಂಧನದ ಸಾಮಾನ್ಯ ಅಭ್ಯರ್ಥಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News