ಕದ್ರಿ: ಕಲ್ಕೂರ ಪ್ರತಿಷ್ಠಾನ ವತಿಯಿಂದ ಮಕ್ಕಳ ಉತ್ಸವದ 'ಶ್ರೀಕೃಷ್ಣ ವೇಷ ಸ್ಪರ್ಧೆ'

Update: 2018-09-02 12:07 GMT

ಮಂಗಳೂರು, ಸೆ. 2: ಶ್ರೀ ಕೃಷ್ಣ ಜನ್ಮಷ್ಟಾಮಿಯ ಪ್ರಯುಕ್ತ  ಮಂಗಳೂರಿನ ಕಲ್ಕೂರ ಪ್ರತಿಷ್ಠಾನ ವತಿಯಿಂದ 24ನೇ ವರ್ಷದ ರಾಷ್ಟ್ರೀಯ ಮಕ್ಕಳ ಉತ್ಸವದ ಶ್ರೀ ಕೃಷ್ಣ ವೇಷ ಸ್ಪರ್ಧೆ ನಡೆಯಿತು.

ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ವಿವಿಧ ಸ್ಪರ್ಧೆಗಳು ನಡೆಯಿತು. ಒಟ್ಟು 34 ವಿಭಾಗದಲ್ಲಿ ಏಕಕಾಲದಲ್ಲಿ 9 ವೇದಿಕೆಯಲ್ಲಿ ಸ್ಪರ್ಧೆ ನಡೆಯಿತು. ಮೂರು ಸಾವಿರಕ್ಕೂ ಅಧಿಕ ಪುಟಾಣಿಗಳು ಭಾಗವಹಿಸಿದ್ದರು.

ಈ ವೇಳೆ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News