ಬೆಳ್ತಂಗಡಿ: ನದಿಯಲ್ಲಿ ಮುಳುಗಿ ಯುವಕ ಮೃತ್ಯು

Update: 2018-09-02 15:07 GMT

ಬೆಳ್ತಂಗಡಿ, ಸೆ. 2: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೇರುಕಟ್ಟೆ ಎರುಕಡಪು ಎಂಬಲ್ಲಿ ಸ್ನಾನಕ್ಕೆಂದು ನದಿಗೆ ಇಳಿದಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ. 

ಮೃತ ಯುವಕನನ್ನು ಇಲ್ಲಿನ ಕುಳಾಯಿ ಹರ್ಮಾಡಿ ನಿವಾಸಿ ಕೇಶವ ಪೂಜಾರಿ ಎಂಬವರ ಪುತ್ರ ಹರಿಪ್ರಸಾದ್ (18) ಎಂದು ಗುರುತಿಸಲಾಗಿದೆ.

ಗೆಳೆಯರೊಂದಿಗೆ ಸ್ನಾನಕ್ಕೆಂದು ನದಿಗೆ ತೆರಳಿದ್ದ ವೇಳೆ ಈತ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾಗಿದ್ದು, ಸ್ಥಳೀಯರ ನೆರವಿನೊಂದಿಗೆ ಕೂಡಲೇ ಆತನನ್ನು ನೀರಿನಿಂದ ಮೇಲೆತ್ತಿದರೂ ಆ ವೇಳೆಗೆ ಆತ ಮೃತಪಟ್ಟಿದ್ದ ಎಂದು ತಿಳಿದುಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News