ಕಡಪ: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಕಾರಿಗೆ ಚಪ್ಪಲಿ ಎಸೆದ ಮಹಿಳೆ

Update: 2018-09-02 17:11 GMT

ಕರ್ನೂಲ್, ಸೆ.2: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಯವರ ಕಾರಿಗೆ ಮಹಿಳೆಯೊಬ್ಬರು ಚಪ್ಪಲಿ ಎಸೆದಿರುವ ಘಟನೆ ಆಂಧ್ರ ಪ್ರದೇಶದ ಕಡಪದಲ್ಲಿ ನಡೆದಿದೆ. ಕೇಂದ್ರ ಸಚಿವರು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನ ಉದ್ಘಾಟನೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಸಚಿವರ ಕಾರು ಕಡಪಾ ಬಳಿ ಸಾಗುತ್ತಿದ್ದಾಗ ರಾಯಲಸೀಮಾ ಕಮ್ಯುನಿಸ್ಟ್ ಪಾರ್ಟಿಯ ಕಾರ್ಯಕರ್ತರು ಸಚಿವರ ಕಾರನ್ನು ತಡೆದರು. ಈ ಸಂದರ್ಭ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭ ಮಹಿಳೆಯೊಬ್ಬರು ಸಚಿವರ ಕಾರಿಗೆ ಚಪ್ಪಲಿಯನ್ನು ಎಸೆದಿದ್ದಾರೆ ಎನ್ನಲಾಗಿದೆ.  ಕೂಡಲೇ ಪೊಲೀಸರು ಆಕೆಯನ್ನು ವಶಕ್ಕೆ ಪಡೆದುಕೊಂಡರು ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News