ರಾಯಪುರದಲ್ಲಿ ಎನ್‌ಕೌಂಟರ್: ನಾಲ್ವರು ನಕ್ಸಲೀಯರ ಸಾವು

Update: 2018-09-02 17:42 GMT

ರಾಯಪುರ, ಸೆ. 2: ಚತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆ ರವಿವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಮಹಿಳೆ ಸಹಿತ ನಾಲ್ವರು ನಕ್ಸಲೀಯರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ ತಂಡ ಗುಮಿಯಾಬೇಡಾ ಗ್ರಾಮದ ಕಾಡಿನಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಅಪರಾಹ್ನ 2.30 ಗಂಟೆಗೆ ಗುಂಡಿನ ಚಕಮಕಿ ನಡೆಯಿತು ಎಂದು ನಾರಾಯಣಪುರದ ಪೊಲೀಸ್ ಅಧೀಕ್ಷಕ ಜಿತೇಂದ್ರ ಶುಕ್ಲಾ ಹೇಳಿದ್ದಾರೆ. ಗುಂಡಿನ ಚಕಮಕಿ ಬಳಿಕ ಉಗ್ರರು ಪಕ್ಕದ ಕಾಡು ಪ್ರವೇಶಿಸಿ ನಾಪತ್ತೆಯಾದರು. ಎನ್‌ಕೌಂಟರ್ ನಡೆದ ಸ್ಥಳದಲ್ಲಿ ನಾಲ್ವರು ನಕ್ಸಲೀಯರ ಮೃತದೇಹ ಹಾಗೂ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ಎಸ್‌ಪಿ ಹೇಳಿದ್ದಾರೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News