ಮೇಲಧಿಕಾರಿಗಳ ಕಿರುಕುಳ ಆರೋಪ: ಬಿಎಂಟಿಸಿ ಸಿಬ್ಬಂದಿಯಿಂದ ಪ್ರತಿಭಟನೆ

Update: 2018-09-03 09:21 GMT

ಬೆಂಗಳೂರು, ಸೆ.3: ಮೇಲಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕೊತ್ತನೂರು ದಿಣ್ಣೆ ಡಿಪೋ  34ರ ಬಿಎಂಟಿಸಿ ಸಿಬ್ಬಂದಿ ಇಂದು ಬೆಳಗ್ಗೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ 100ಕ್ಕೂ ಅಧಿಕ ಸಿಬ್ಬಂದಿ ಭಾಗವಹಿಸಿದ್ದರಿಂದ ಯಾವುದೇ ಬಸ್‌ಗಳು ಡಿಪೋ ದಿಂದ ಹೊರಗೆ ಬಂದಿರಲಿಲ್ಲ.

ರಜೆ ಹಾಗೂ ಕೆಲಸದ ಶಿಫ್ಟ್ ವಿಚಾರವಾಗಿ ಡಿಪೊ ಮ್ಯಾನೇಜರ್ ತಾರತಮ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕಳೆದ ಎಂಟು ತಿಂಗಳಿನಿಂದ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ಡಿಪೋ ಮ್ಯಾನೇಜರ್ ಚಂದ್ರಶೇಖರ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News