ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ರೌಡಿಶೀಟರ್ ಹತ್ಯೆ

Update: 2018-09-03 13:03 GMT

ಬೆಂಗಳೂರು, ಸೆ.3: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ರೌಡಿಶೀಟರ್ ಓರ್ವನನ್ನು ಕೊಲೆ ಮಾಡಿರುವ ಘಟನೆ ಇಲ್ಲಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಗುರುಮೂರ್ತಿ(27) ಕೊಲೆಯಾದ ವ್ಯಕ್ತಿ ಎಂದು ಪೊಲೀಸರು ಗುರುತಿಸಿದ್ದಾರೆ.

ವಿಶ್ವೇಶ್ವರ ಲೇಔಟ್‌ನ ಖಾಲಿ ನಿವೇಶನದಲ್ಲಿ ಗುರುಮೂರ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು, ತೀವ್ರವಾಗಿ ಗಾಯಗೊಳಿಸಿ ಪರಾರಿಯಾಗಿದ್ದಾರೆ. ಸೋಮವಾರ ಮುಂಜಾನೆ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತ ಗುರುಮೂರ್ತಿ ವಿರುದ್ಧ ಕಾಮಾಕ್ಷಿಪಾಳ್ಯ, ಅನ್ನಪೂರ್ಣೆಶ್ವರಿ ನಗರ, ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಬ್ಯಾಡರಹಳ್ಳಿ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News