ಮೈತ್ರಿ ಸರಕಾರವನ್ನು ಜನತೆ ಕೈ ಹಿಡಿದಿದ್ದಾರೆ: ಸಚಿವ ಬಂಡೆಪ್ಪ ಕಾಶಂಪೂರ್

Update: 2018-09-03 13:09 GMT

ಬೆಂಗಳೂರು, ಸೆ. 3: ರಾಜ್ಯದ ಜನತೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಆಡಳಿತ ತೃಪ್ತಿ ತಂದಿದೆ. ಹೀಗಾಗಿ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅನೇಕ ಕಡೆಗಳಲ್ಲಿ ಜೆಡಿಎಸ್ ಜಯಭೇರಿ ಬಾರಿಸಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್ ಹೇಳಿದ್ದಾರೆ.

ಸೋಮವಾರ ನಗರದ ಜೆಪಿ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮೈತ್ರಿ ಸರಕಾರ ಸುಭದ್ರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಅತಂತ್ರ ಪರಿಸ್ಥಿತಿ ಸೃಷ್ಟಿಯಾಗಿರುವ ಕಡೆಗಳಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮೂಲಕ ಅಧಿಕಾರ ಹಿಡಿಯಲು ಈಗಾಗಲೇ ಜೆಡಿಎಸ್ ವರಿಷ್ಠ ದೇವೇಗೌಡ ಸ್ಪಷ್ಟಣೆ ನೀಡಿದ್ದಾರೆ ಎಂದರು.

ಋಣ ಪರಿಹಾರ ಕಾಯ್ದೆಗೆ ರಾಷ್ಟ್ರಪತಿ ಅಂಕಿತದ ನಿರೀಕ್ಷೆಯಲ್ಲಿದ್ದು, ಅವರ ಒಪ್ಪಿಗೆ ದೊರೆಯುವವರೆಗೂ ಖಾಸಗಿ ಲೇವಾದೇವಿದಾರರ ಕಿರುಕುಳಕ್ಕೆ ನಿಯಂತ್ರಣ ಹೇರಲು ಈಗಾಗಲೇ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದ ಅವರು, ರಾಷ್ಟ್ರಪತಿ ಅಂಕಿತರ ಬಳಿಕ ಋಣ ಪರಿಹಾರ ಕಾಯ್ದೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News