ಬೆಂಗಳೂರು: ಬೆದರಿಸಿ ನಗದು, ಮೊಬೈಲ್ ಕಳವು

Update: 2018-09-03 13:24 GMT

ಬೆಂಗಳೂರು, ಸೆ.3: ವ್ಯಕ್ತಿಯೊಬ್ಬನನ್ನು ಬೆದರಿಸಿ ನಗದು, ಮೊಬೈಲ್ ಕಳವು ಮಾಡಿರುವ ಘಟನೆ ಇಲ್ಲಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಾಗಸಂದ್ರ ನಿವಾಸಿ ಮೃತ್ಯುಂಜಯ ಎಂಬವರನ್ನು ಬೆದರಿಸಿ ಹಣ ದರೋಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಬೆಳಗಿನ ಜಾವ ಮೃತ್ಯುಂಜಯ ಅವರು ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಮನೆ ಸಮೀಪವೇ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಚಾಕುವಿನಿಂದ, ಬೆದರಿಸಿ ಮೊಬೈಲ್ ಹಾಗೂ ನಗದು ಕಸಿದು ಪರಾರಿಯಾಗಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೀಣ್ಯ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News