​ಕುಂದಾಪುರ: ಸೆ.5ರಂದು ಗೌರಿ ಲಂಕೇಶ್ ಸಂಸ್ಮರಣೆ

Update: 2018-09-03 16:19 GMT

ಉಡುಪಿ, ಸೆ.3: ಕಳೆದ ವರ್ಷ ಬೆಂಗಳೂರಿನ ತಮ್ಮ ನಿವಾಸದ ಸಮೀಪ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಅವರ ಸಂಸ್ಮರಣಾ ಕಾರ್ಯಕ್ರಮವು ಗೌರಿ ಬಳಗ ಕುಂದಾಪುರದ ವತಿಯಿಂದ ಸೆ.5ರಂದು ಸಂಜೆ 6ಗಂಟೆಗೆ ಕುಂದಾಪುರದ ಶಾಸ್ತ್ರಿ ಸರ್ಕಲ್‌ನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನುದ್ದೇಶಿಸಿ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪ್ರದೀಪ್ ಕುಮಾರ್ ಶೆಟ್ಟಿ ಮಾತನಾಡಲಿದ್ದಾರೆ. ಗೌರಿ ಅಭಿಮಾನಿ ಗಳು ಹಾಗೂ ಸಮಾನಮನಸ್ಕ ಸ್ನೇಹಿತರು ಈ ಕಾರ್ಯಕ್ರಮದಲ್ಲಿ ಭಾಗವಹಿಸ ಬೇಕೆಂದು ಕಾರ್ಯಕ್ರಮದ ಸಂಚಾಲಕ, ಪತ್ರಕರ್ತ ರಾಮಕೃಷ್ಣ ಹೇರ್ಳೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News