ವಿದ್ಯಾರ್ಥಿ ನಾಪತ್ತೆ

Update: 2018-09-03 16:28 GMT

ಕುಂದಾಪುರ, ಸೆ.3: ಕೋಟ ಪ್ರಜ್ಞಾ ಟ್ಯುಟೋರಿಯಲ್ ಕಾಲೇಜಿನ ದ್ವಿತೀಯ ಪಿಯುಸಿ ಕಾಮರ್ಸ್ ವಿದ್ಯಾರ್ಥಿಯೊಬ್ಬ ಆ.31ರಂದು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಕೊಂಡಬಾಗಿಲು ನಿವಾಸಿ ದಾವಾಜ್ಯ ನಾಯ್ಕ ಎಂಬವರ ಮಗ ಸುಮನ ಪಿ.ಎಂ.(19) ಎಂಬಾತ ಕುಂದಾಪುರದ ಗುಲ್ವಾಡಿಯಲ್ಲಿರುವ ಸಂಬಂಧಿಕರ ಮನೆಯಲ್ಲಿ ವಾಸ ಮಾಡಿಕೊಂಡಿದ್ದು, ಬೆಳಗ್ಗೆ ಮನೆಯಿಂದ ಕಾಲೇಜಿಗೆ ಹೊರಟವನು ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News