ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಬಿಜೆಪಿ ಮುಖಂಡನಿಂದ ರೈಲ್ವೆ ಸಿಬ್ಬಂದಿ ಮೇಲೆ ಹಲ್ಲೆ; ಆರೋಪ

Update: 2018-09-03 17:24 GMT

ಶಿವಮೊಗ್ಗ, ಸೆ.3: ಬಿಜೆಪಿಯ ಜಿಲ್ಲಾ ಪಂಚಾಯತ್ ಸದಸ್ಯರೋರ್ವರು ರೈಲ್ವೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ತಡರಾತ್ರಿ ನಡೆದಿದೆ ಎನ್ನಲಾಗಿದೆ.

ಮೈಸೂರು ತಾಳಗುಪ್ಪ ರೈಲು ತಾಳಗುಪ್ಪ ಕಡೆ ರಾತ್ರಿ ತೆರಳುತ್ತಿದ್ದಾಗ ಸೂಡೂರು ಕ್ರಾಸಿಂಗ್ ನಲ್ಲಿ ಗೇಟ್ ಹಾಕಲಾಗಿತ್ತು. ಈ ವೇಳೆ ಶಿವಮೊಗ್ಗ ಕಡೆಯಿಂದ ಕಾರಿನಲ್ಲಿ ಬಂದ ಜಿಪಂ ಸದಸ್ಯ, 'ನಾನು ಬಂದಾಗ ಗೇಟ್ ಹಾಕಿದಿಯೇನೋ..' ಎಂದು ಅಲ್ಲಿದ್ದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನು ಪ್ರಶ್ನಿಸಲು ಬಂದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ 

ಜಿಪಂ ಸದಸ್ಯ ಪಾನಮತ್ತರಾಗಿದ್ದರು ಎನ್ನಲಾಗಿದ್ದು, ಹಲ್ಲೆ ನಡೆಸಿದ್ದಾರೆನ್ನಲಾದ ವಿಡಿಯೋ ಹರಿದಾಡುತ್ತಿದೆ. ಈ ಸಂಬಂಧ ರಿಪ್ಪನ್ ಪೇಟೆ ಠಾಣೆ ಯಲ್ಲಿ ದೂರು ದಾಖಲಾಗಿದೆ.

ವೈದ್ಯರಿಂದ ಡಿಸ್ಚಾರ್ಜ್
ಹಲ್ಲೆಗೊಳಗಾದ ಸಿಬ್ಬಂದಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿನ ವೈದ್ಯರು ಒತ್ತಡ ಬಂದ ಹಿನ್ನೆಲೆಯಲ್ಲಿ ನೋವಿನಿಂದ ಸಿಬ್ಬಂದಿ ನರಳುತ್ತಿದ್ದರೂ ಡಿಸ್ಚಾರ್ಜ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News