ಸೌದಿ: ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ವ್ಯಕ್ತಿ ಮೃತ್ಯು

Update: 2018-09-04 14:32 GMT

ಮಂಗಳೂರು, ಸೆ.4: ಸೌದಿ ಅರೇಬಿಯಾದ ಜುಬೈಲ್ ನ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ  ಮಂಗಳವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಮೂಲತಃ ಉಡುಪಿ, ಬ್ರಹ್ಮಾವರ ಬಳಿಯ ಹೊನ್ನಲ ನಿವಾಸಿಯಾಗಿದ್ದು, ಕಳೆದ 4 ವರ್ಷಗಳಿಂದ ಕೃಷ್ಣಾಪುರ ಚೊಕ್ಕಬೆಟ್ಟುವಿನಲ್ಲಿ ವಾಸವಾಗಿರುವ ಝಾಕಿರ್ ಎಂದು ಗುರುತಿಸಲಾಗಿದೆ. ಅವರು ಸುಮಾರು 15 ವರ್ಷಗಳಿಂದ ಸೌದಿಯಲ್ಲಿ ನೆಲೆಸಿದ್ದರು. ಮೃತರು ತಂದೆ, ತಾಯಿ, ಪತ್ನಿ ಹಾಗು ಓರ್ವ ಪುತ್ರಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಕಳೆದ ತಿಂಗಳು ಸಂಬಂಧಿಕರ ಮದುವೆಗೆಂದು ಊರಿಗೆ ಬಂದಿದ್ದು, ನಂತರ ಸೌದಿಗೆ ಹಿಂದಿರುಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News