ಚಾಮರಾಜನಗರ: 3 ಲಕ್ಷ ರೂ. ಮೌಲ್ಯದ ಗಾಂಜಾ ವಶ

Update: 2018-09-04 14:17 GMT

ಚಾಮರಾಜನಗರ, ಸೆ.4 : ಅಬಕಾರಿ ಇಲಾಖೆಯ ಅಧಿಕಾರಿಗಳು ಕೊಳ್ಳೇಗಾಲ ತಾಲೂಕಿನ ಕರಳಕಟ್ಟೆ ಗ್ರಾಮದ ಜಮೀನಲ್ಲಿ ಹಾಗೂ ಅಲ್ಲಿದ್ದ ಮನೆಯ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಬೆಳೆದಿದ್ದ ಹಾಗೂ ದಾಸ್ತಾನು ಮಾಡಲಾಗಿದ್ದ 3 ಲಕ್ಷ ರೂ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. 

ಭಾನುವಾರ ಕೊಳ್ಳೇಗಾಲ ತಾಲೂಕಿನ ಕರಳಕಟ್ಟೆ ಗ್ರಾಮದ ಗುಂಡಾಲ ಜಲಾಶಯ ರಸ್ತೆಯ ಪಕ್ಕದ ಜಡೇಗೌಡ ಎಂಬಾತನಿಗೆ ಸೇರಿದ ಜಮೀನು ಹಾಗೂ ಅಲ್ಲಿಯೇ ಇದ್ದ ಮನೆಯ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಬೆಳೆದಿದ್ದ 324 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದರು. ಅಲ್ಲದೆ ಮಾರಾಟಕ್ಕೆ ಸಿದ್ದಪಡಿಸಿದ್ದ 1.6ಕೆ.ಜಿ ಒಣಗಿದ ಗಾಂಜಾವನ್ನು ಜಪ್ತಿಮಾಡಿದ್ದಾರೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಜಡೇಗೌಡನ್ನು ಬಂಧಿಸಿದ್ದು, ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆದಿದೆ.

ಅಬಕಾರಿ ಉಪ ಅಧೀಕ್ಷಕರಾದ ಗಂಗಾಂದರ ಹೆಚ್.ಮುದೆಣ್ಣವರ್, ನಿರೀಕ್ಷಕರಾದ ಎ.ಎ.ಮುಜಾವರ್, ಕೆ.ವಿ.ಲೋಹಿತ್, ಎಂ.ಬಿ.ಉಮಾಶಂಕರ್, ಅರಣ್ಯಾಧಿಕಾರಿಗಳಾದ ಮಹೇಶ್, ನವೀನ್, ಅಬಕಾರಿ ಸಿಬ್ಬಂದಿ ರವಿಕುಮಾರ್, ಕೃಷ್ಣಮೂರ್ತಿ, ರಮೇಶ್, ಪ್ರದೀಪ್, ಜಯಪ್ರಕಾಶ್, ಸುಂದ್ರಪ್ಪ, ಸಿದ್ದಯ್ಯ, ವೀರತಪ್ಪ ಮಂಜುನಾಥ, ಸಂತೋಷ್‍ ಕುಮಾರ್, ಮಹೇಶ ಆನಂದ, ಹೇಮಂತ್, ಮೋಹನ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News