ಸನಾತನ ಸಂಸ್ಥೆ ನಿಷೇಧದ ಬೇಡಿಕೆ ಖಂಡಿಸಿ ಪ್ರತಿಭಟನೆ
Update: 2018-09-04 17:33 GMT
ಉಡುಪಿ, ಸೆ.4: ಸನಾತನ ಸಂಸ್ಥೆಯನ್ನು ನಿಷೇಧಿಸಬೇಕೆಂಬ ಬೇಡಿಕೆಯನ್ನು ಖಂಡಿಸಿ ಹಿಂದೂ ಜನಜಾಗೃತಿ ಸಮಿತಿಯ ನೇತೃತ್ವದಲ್ಲಿ ಮಂಗಳವಾರ ಅಜ್ಜರ ಕಾಡು ಹುತಾತ್ಮ ಸ್ಮಾರಕದ ಎದುರು ಪ್ರತಿಭಟನಾ ಸಭೆ ನಡೆಯಿತು.
ಸಭೆಯನ್ನುದ್ದೇಶಿಸಿ ಕರಿಂಜೆ ಮಠದ ಶ್ರೀಮುಕ್ತಾನಂದ ಸ್ವಾಮೀಜಿ ಮಾತನಾಡಿ ದರು. ಸಭೆಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ಸಮನ್ವಯಕ ಗುರು ಪ್ರಸಾದ್, ಸನಾತನ ಸಂಸ್ಥೆಯ ಡಾ.ಶ್ರೀಕಲಾ ಜೋಶಿ, ಚೈತ್ರಾ ಕುಂದಾಪುರ, ಹಿಂದೂ ಜನಜಾಗೃತಿ ಸಮಿತಿಯ ಸಮನ್ವಯಕ ವಿಜಯ ಕುಮಾರ್ ಮೊದ ಲಾದವರು ಉಪಸ್ಥಿತರಿದ್ದರು