ಬೆಳ್ತಂಗಡಿ: ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ

Update: 2018-09-04 17:56 GMT

ಬೆಳ್ತಂಗಡಿ, ಸೆ. 4: ಕಳೆಂಜ ಗ್ರಾಮದ ಕಬ್ಲಾಜೆಯಲ್ಲಿ ಯುವತಿಯೊಬ್ಬಳು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.

ನೋಣಯ್ಯ ಗೌಡ ಎಂಬವರ ಪುತ್ರಿ ಸುನೀತಾ ಆತ್ಮಹತ್ಯೆ ಮಾಡಿಕೊಂಡವರು.

ಮನೆಯಲ್ಲಿ ಯಾರೂ ಇಲ್ಲದ ಸಮಯ ಯಾವುದೋ ಕಾರಣದಿಂದ ಮನನೊಂದು ಸೀಮೆ ಎಣ್ಣೆ ಮೈಗೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ವಿಪರೀತ ಸುಟ್ಟ ಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರ ತಾಯಿ ಹರಿಣಿ ನೀಡಿದ ದೂರಿನಂತೆ ಧರ್ಮಸ್ಥಳ  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News