ಮೋಡ ಬಿತ್ತನೆ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ: ಸಚಿವ ವೆಂಕಟರಾವ್ ನಾಡಗೌಡ

Update: 2018-09-05 14:18 GMT

ಬೆಂಗಳೂರು, ಸೆ. 5: ರಾಜ್ಯದಲ್ಲಿ ಮಳೆ ಇಲ್ಲದ ಪ್ರದೇಶಗಳಲ್ಲಿ ಮೋಡ ಬಿತ್ತನೆ ಮಾಡುವ ಬಗ್ಗೆ ರಾಜ್ಯ ಸರಕಾರದ ಮುಂದೆ ಪ್ರಸ್ತಾವನೆ ಇದ್ದು, ಈ ಸಂಬಂಧ ಯಾವುದೇ ಚರ್ಚೆ ಆಗಿಲ್ಲ ಎಂದು ಪಶು ಸಂಗೋಪನಾ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಳೆದ ವರ್ಷ ಮೋಡ ಬಿತ್ತನೆ ಮಾಡಲಾಗಿತ್ತು. ಆ ವರದಿ ತರಿಸಿಕೊಂಡು ಪರಿಶೀಲಿಸಿ ಮೋಡ ಬಿತ್ತನೆ ಸಾಧಕ-ಬಾಧಕಗಳನ್ನು ಪರಾಮರ್ಶಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ನಂದಿನಿ ಹಾಲಿನ ದರ ಏರಿಕೆಯ ಪ್ರಸ್ತಾವನೆ ಸರಕಾರದ ಮುಂದಿಲ್ಲ. ಆ ಬಗ್ಗೆ ಆಲೋಚನೆಯನ್ನು ಮಾಡಿಲ್ಲ. ಈ ಸಂಬಂಧ ಸರಕಾರದಲ್ಲಿ ಯಾವುದೇ ರೀತಿಯ ಚರ್ಚೆ ಮಾಡಿಲ್ಲ ಎಂದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶವನ್ನು ನೋಡಿದರೆ ಮೈತ್ರಿ ಸರಕಾರವನ್ನು ಜನತೆ ಒಪ್ಪಿದ್ದಾರೆಂಬುದು ಸ್ಪಷ್ಟ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News