ಯಾವುದೇ ರಾಜಕೀಯ ಪಕ್ಷಗಳ ನಾಯಕರು ಭೇಟಿ ಮಾಡಿಲ್ಲ: ಐಟಿ ಇಲಾಖೆ ಸ್ಪಷ್ಟಣೆ

Update: 2018-09-05 14:45 GMT

ಬೆಂಗಳೂರು, ಸೆ. 5: ಆದಾಯ ತೆರಿಗೆ (ಐಟಿ) ಇಲಾಖೆ ಆಯುಕ್ತರನ್ನು ಯಾವುದೇ ರಾಜಕೀಯ ಪಕ್ಷಗಳ ನಾಯಕರು ಭೇಟಿ ಮಾಡಿಲ್ಲ ಎಂದು ಕರ್ನಾಟಕ ಮತ್ತು ಗೋವಾ ಆದಾಯ ತೆರಿಗೆ ಇಲಾಖೆ ಜಂಟಿ ಆಯುಕ್ತ ತಮಿಳ್ ಸೆಲ್ವಂ ಎಸ್. ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.

ಯಾವುದೇ ರಾಜಕೀಯ ಪಕ್ಷಗಳ ನಾಯಕರು ಮತ್ತವರ ಸಂಬಂಧಿಕರು ಐಟಿ ಆಯುಕ್ತರನ್ನು ಭೇಟಿಯಾಗಿಲ್ಲ. ಈ ಸಂಬಂಧ ಸುದ್ದಿ ಮಾಧ್ಯಮಗಳಲ್ಲಿ ಬಂದ ವರದಿಗಳಲ್ಲಿ ಯಾವುದೇ ಹುರುಳಿಲ್ಲ. ಆ ಸುದ್ದಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ಮತ್ತು ಗೋವಾ ಐಟಿ ಇಲಾಖೆ ಎರಡು ವರ್ಷಗಳಲ್ಲಿ ಹಲವು ದಾಳಿಗಳನ್ನು ನಡೆಸಿದ್ದು ಇಲಾಖೆ ಹಲವು ಮಹತ್ವದ ಆದಾಯ ತೆರಿಗೆದಾರರನ್ನು ಪತ್ತೆ ಮಾಡಿದೆ. ಆದರೆ, ಯಾವುದೇ ರಾಜಕೀಯ ಪ್ರೇರಿತ ದಾಳಿಗಳನ್ನು ನಡೆಸಿಲ್ಲ ಎಂದು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News