ಬೆಂಗಳೂರು: ರಸ್ತೆ ಅಪಘಾತಕ್ಕೆ ಪಾದಚಾರಿ ಬಲಿ

Update: 2018-09-05 15:13 GMT

ಬೆಂಗಳೂರು, ಸೆ.5: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ರಾಜಾಜಿನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೆಂಪೇಗೌಡ ಬಡಾವಣೆ ನಿವಾಸಿ ಮಹೇಶ್‌ ಕುಮಾರ್(32) ಮೃತಪಟ್ಟ ದುರ್ದೈವಿ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದ ರಿಂಗ್ ರಸ್ತೆಯ ಚೌಡೇಶ್ವರಿ ಬಸ್ ನಿಲ್ದಾಣ ಸಮೀಪ ರಾತ್ರಿ 11:15ರ ಸಮಯದಲ್ಲಿ ಮಹೇಶ್‌ ಕುಮಾರ್ ರಸ್ತೆ ದಾಟುತ್ತಿದ್ದಾಗ ಅತಿವೇಗವಾಗಿ ಮುನ್ನುಗ್ಗಿದ ಕಾರು ಇವರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಗಂಭೀರ ಗಾಯಗೊಂಡಿದ್ದ ಮಹೇಶ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಸಂಬಂಧ ರಾಜಾಜಿನಗರ ಸಂಚಾರ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News