ದಸರಾ ಗಜಪಡೆ

Update: 2018-09-05 18:22 GMT

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಯ ಚಿನ್ನದ ಅಂಬಾರಿ ಹೊರುವ ಅರ್ಜುನ ಸೇರಿದಂತೆ 6 ಗಜಪಡೆಗಳ ಮೊದಲ ತಂಡ ಬುಧವಾರ ಸಂಜೆ 4:30ಕ್ಕೆ ಸಲ್ಲುವ ಶುಭ ಲಗ್ನದಲ್ಲಿ ಅರಮನೆ ಪ್ರವೇಶಿಸುತ್ತಿದ್ದಂತೆ ಭವ್ಯ ಸ್ವಾಗತ ನೀಡಲಾಯಿತು. ಕಾಡಿನಿಂದ ನಾಡಿಗೆ ಪ್ರವೇಶಿಸಿದ ಆನೆಗಳು ಅರಮನೆಯ ಜಯಮಾರ್ತಾಂಡ ದ್ವಾರದ ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಪುಷ್ಪಾರ್ಚನೆ ಮಾಡುವ ಮೂಲಕ ಬರಮಾಡಿಕೊಂಡರು. ಜಿಲ್ಲಾಡಳಿತ ಮತ್ತು ಅರಮನೆ ಮಂಡಳಿಯ ವತಿಯಿಂದ ಪೂರ್ಣಕುಂಭ ಸ್ವಾಗತ ನೀಡಿ, ಪೊಲೀಸ್ ಗೌರವ ರಕ್ಷೆ ಮೂಲಕ ಸ್ವಾಗತ ಕೋರಲಾಯಿತು. ಬಳಿಕ ಅಂಬವಿಲಾಸ ಅರಮನೆ ಮುಂಭಾಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಜನಪ್ರತಿನಿಧಿಗಳು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor