ಪುತ್ತೂರು : ಕೆರೆಗೆ ಹಾರಿ ಯುವಕ ಆತ್ಮಹತ್ಯೆ
Update: 2018-09-05 18:31 GMT
ಪುತ್ತೂರು, ಸೆ. 5 : ಅಂಚೆ ಕಚೇರಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗದಲ್ಲಿದ್ದ ಅವಿವಾಹಿತ ಯುವಕನೋರ್ವ ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರ ಠಾಣೆ ವ್ಯಾಪ್ತಿಯ ಕೆದಿಲ ಗ್ರಾಮದ ಮೋರಮೊಗ್ರು ಎಂಬಲ್ಲಿ ಬುಧವಾರ ಸಂಭವಿಸಿದೆ.
ಕೆದಿಲ ಗ್ರಾಮದ ಪೇರಮೊಗ್ರು ನಿವಾಸಿ ಪೂವಪ್ಪ ಪೂಜಾರಿ ಎಂಬವರ ಪುತ್ರ ನವೀನ್ ಕುಮಾರ್ (34) ಆತ್ಮಹತ್ಯೆ ಮಾಡಿಕೊಂಡವರು.
ನವೀನ್ ಕುಮಾರ್ ಬಂಟ್ವಾಳ ಅಂಚೆ ಕಚೇರಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗದಲ್ಲಿದ್ದರು. ಬುಧವಾರ ಬೆಳಗ್ಗೆ ಕಾಣೆಯಾಗಿದ್ದ ಅವರಿಗಾಗಿ ಮನೆ ಮಂದಿ ಸೇರಿಕೊಂಡು ಹುಡುಕಾಟ ನಡೆಸಿದ ವೇಳೆ ಅವರ ಮೃತದೇಹ ಮನೆಯ ಸಮೀಪದ ತೋಟದ ಕೆರೆಯಲ್ಲಿ ಪತ್ತೆಯಾಗಿತ್ತು.
ಅವಿವಾಹಿತರಾಗಿದ್ದ ನವೀನ್ ಕುಮಾರ್ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಮೃತರ ಅಣ್ಣ ಮನೋಜ್ ಅವರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.