ತೊಕ್ಕೊಟ್ಟು: ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸಿಗರಿಗೆ ಹಲ್ಲೆ ಆರೋಪ; ದೂರು

Update: 2018-09-06 05:50 GMT

ತೊಕ್ಕೊಟ್ಟು, ಸೆ. 6: ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾದ ಘಟನೆ ತೊಕ್ಕೊಟ್ಟು ಒಳಪೇಟೆಯ ಬಾರೊಂದರಲ್ಲಿ ತಡರಾತ್ರಿ ನಡೆದಿದೆ. 

ಕೃಷ್ಣ ನಗರ ನಿವಾಸಿ ಜಾರ್ಜ್ (51), ಮೋಹನದಾಸ್ (42) ಹಲ್ಲೆಗೊಳಗಾದವರು ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿದಕ್ಕಾಗಿ ದಾಳಿ ಮಾಡಲಾಗಿದೆ ಎಂದು ಹಲ್ಲೆಗೊಳಗಾದವರು ತಿಳಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಚಿತ್ರಾ ಚಂದ್ರಕಾಂತ್  ಅವರು ಜಯಗಳಿಸಿರುವ ವಾರ್ಡಿನಲ್ಲಿ ಈ ಘಟನೆ ನಡೆದಿದೆ.

ಬಿಜೆಪಿ ಕಾರ್ಯಕರ್ತರೆನ್ನಲಾದ ಕವಿತ್, ಅರುಣ್ ಮತ್ತು ಸುನಿ ಎಂಬವರು ಹಲ್ಲೆ ಮಾಡಿರುವುದಾಗಿ ದೂರಲಾಗಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News