ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘ ನೂತನ ಶಾಖೆ ಉದ್ಘಾಟನೆ

Update: 2018-09-06 11:32 GMT

ಬಂಟ್ವಾಳ, ಸೆ. 6: ಬಂಟ್ವಾಳ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘ ನಿಯಮಿತ ಇದರ ನೂತನ ಶಾಖೆ ಉದ್ಘಾಟನೆ ಹಾಗೂ ಸುವರ್ಣ ಮಹೋತ್ಸವ ಕಾರ್ಯಕ್ರಮ ಸೆ.9ರಂದು ಮೆಲ್ಕಾರ್, ಜರ್ನಾದನ ಸಂಕೀರ್ಣದಲ್ಲಿ ನಡೆಯಲಿದೆ. 

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಶಾಖೆಯನ್ನು ಉದ್ಘಾಟಿಸಲಿದ್ದು, ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಮೊಡಂಕಾಪು ಚರ್ಚ್‍ನ ಪ್ರಧಾನ ಧರ್ಮ ಗುರು ಅ.ವಂ. ಮ್ಯಾಕ್ಸಿಂ ಎಲ್. ನೊರೊನ್ಹಾ ಉದ್ಘಾಟಿಸಲಿದ್ದಾರೆ. ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಪುಣಚ ಸಭಾಧ್ಯಕ್ಷತೆ ವಹಿಸಲಿದ್ದು, ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದು, ರೋಟರಿ ಸಂಸ್ಥೆಯ ಜಿಲ್ಲಾ ಸಹಾಯಕ ಗವರ್ನರ್ ಪ್ರಕಾಶ ಕಾರಂತ ನರಿಕೊಂಬು ಠೇವಣಿ ಪತ್ರಗಳನ್ನು ಬಿಡುಗಡೆ ಮಾಡಲಿದ್ದಾರೆ. 

ಭದ್ರತಾ ಕೊಠಡಿಯನ್ನು ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಗಣಕೀರಣವನ್ನು ಸಹಕಾರ ಸಂಘಗಳ ಉಪನಿಬಂಧಕ ಬಿ.ಕೆ.ಸಲೀಂ ಉದ್ಘಾಟಿಸಲಿದ್ದಾರೆ. ಸಂಘದ ಹಿರಿಯ ಸದಸ್ಯ ಲ. ಹಾಜಿ ಜಿ.ಮಹಮ್ಮದ್ ಹನೀಫ್ ಗೋಳ್ತಮಜಲು ಅವರಿಗೆ ಸನ್ಮಾನ, ಬಿ.ಸಿ.ರೋಡ್ ಅನ್ನಪೂರ್ಣೇಶ್ವರೀ ದೇವಸ್ಥಾನದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಅವರಿಗೆ ಗೌರವ ಸಮರ್ಪಣೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೆ.ರುಕ್ಮಯ ಹೆಗ್ಡೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ರಮೇಶ್ ಸಾಲಿಯಾನ್ ಅವರು ಜಂಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News