ಸೆ.8: ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

Update: 2018-09-06 12:32 GMT

ಮಂಗಳೂರು, ಸೆ.6: ಕೊಯಿಲು ಹಬ್ಬ/ಮರಿಯ ಜಯಂತಿ ಹಬ್ಬದ ನಿಮಿತ್ತ ಸೆ.8ರಂದು ಶಾಲಾ-ಕಾಲೇಜು ಸಹಿತ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆಯನ್ನು ಘೋಷಿಸುವಂತೆ ದ.ಕ. ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.

ಕರಾವಳಿಯಲ್ಲಿ ಕ್ರೈಸ್ತರು ಪ್ರತೀ ವರ್ಷ ಸೆ.8ರಂದು ಕೊಯಿಲು ಹಬ್ಬ/ಮರಿಯ ಜಯಂತಿ ಹಬ್ಬವನ್ನು ಆಚರಿಸುತ್ತಿದ್ದಾರೆ. ಮಂಗಳೂರಿನ ಕೆಥೋಲಿಕ್ ಸಭಾ ಹಾಗೂ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ಬೇಡಿಕೆಗಳಿಗೆ ಸ್ಪಂದಿಸಿ ಪ್ರತೀ ವರ್ಷ ಸ್ಥಳೀಯ ಹಾಗೂ ಅಗತ್ಯಕ್ಕನುಗುಣವಾಗಿ ವರ್ಷದಲ್ಲಿ 4 ದಿನಗಳ ರಜೆ ನೀಡಲು ವಿವೇಚನಾಧಿಕಾರವಿದ್ದು, ಅದರಂತೆ ಈ ವಿವೇಚನಾಧಿಕಾರವನ್ನು ಬಳಸಿಕೊಂಡು ರಜೆ ನೀಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News