ಮುಖ್ಯಮಂತ್ರಿ ಕುಮಾರಸ್ವಾಮಿ ನಾಳೆ ಉಡುಪಿಗೆ
Update: 2018-09-06 14:18 GMT
ಉಡುಪಿ, ಸೆ.6: ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸೆ.7ರ ಶುಕ್ರವಾರ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಂಗಳೂರಿನಿಂದ ಬೆಳಗ್ಗೆ 10ಕ್ಕೆ ಉಡುಪಿಗೆ ಆಗಮಿಸುವ ಮುಖ್ಯಮಂತ್ರಿಗಳು ನೇರವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಬಳಿಕ ಅವರು ಅಪರಾಹ್ನ 2:00 ಗಂಟೆಗೆ ಮಂಗಳೂರಿಗೆ ತೆರಳುವರು.