ಕೆ.ಆರ್.ಪೇಟೆ: ಬೈಕ್ನಿಂದ ಬಿದ್ದು ಯುವಕ ಮೃತ್ಯು
Update: 2018-09-06 14:46 GMT
ಕೆ.ಆರ್.ಪೇಟೆ, ಸೆ.6: ತಾಲೂಕಿನ ಬೂಕನಕೆರೆ ಹೋಬಳಿ ರಂಗನಾಥಪುರ ಗೇಟ್ ಬಳಿ ಬೈಕ್ನಿಂದ ಅಯತಪ್ಪಿ ಬಿದ್ದು ಸೆಸ್ಕ್ ಲೈನ್ ಮ್ಯಾನ್ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ತಾಲೂಕಿನ ಉಯ್ಗೋನಹಳ್ಳಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಬೂಕನಕೆರೆ ಗ್ರಾಮದ ಅಭಿಷೇಕ್(25) ಸಾವನ್ನಪ್ಪಿದ ದುರ್ದೈವಿ.
ಅಭಿಷೇಕ್ ಕೆ.ಆರ್.ಪೇಟೆ ಪಟ್ಟಣದಲ್ಲಿ ಸ್ನೇಹಿತನ ಮದುವೆ ರಿಸೆಪ್ಷನ್ ಮುಗಿಸಿಕೊಂಡು ಬರುವಾಗ ರಂಗನಾಥಪುರ ಗೇಟಿನಲ್ಲಿರುವ ರಸ್ತೆ ಉಬ್ಬಿನ ಬಳಿ ಬೈಕಿನಿಂದ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರಾಮಾಂತರ ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಕೆ.ಎನ್.ಗಿರೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.