ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ವಿರೋಧಿಸಿ ಕಾಂಗ್ರೆಸ್ ನಿಂದ ಸೆ.10ಕ್ಕೆ ‘ಭಾರತ್ ಬಂದ್’

Update: 2018-09-06 15:26 GMT

ಹೊಸದಿಲ್ಲಿ, ಸೆ.6: ತೈಲ ಬೆಲೆ ನಿರಂತರವಾಗಿ ಹೆಚ್ಚುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವು ಸೆಪ್ಟಂಬರ್ 10ರಂದು ಭಾರತ್ ಬಂದ್ ಗೆ ಕರೆ ನೀಡಿದೆ. ಸರಕಾರದ ವಿರುದ್ಧದ ಈ ಬಂದ್ ಗೆ ಬೆಂಬಲ ಸೂಚಿಸುವಂತೆ ಕಾಂಗ್ರೆಸ್ ಇತರ ವಿಪಕ್ಷಗಳು ಹಾಗು ನಾಗರಿಕರಲ್ಲಿ ಮನವಿ ಮಾಡಿದೆ.

ಪೆಟ್ರೋಲ್, ಡೀಸೆಲ್ ಹಾಗು ಅಡುಗೆ ಅನಿಲದ ಬೆಲೆಯೇರಿಕೆಯಿಂದ ಸಾಮಾನ್ಯ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಸೆಪ್ಟಂಬರ್ 10ರಂದು ಭಾರತ್ ಬಂದ್ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ” ಎಂದು ಕಾಂಗ್ರೆಸ್ ನಾಯಕ ರಣ್ ದೀಪ್ ಸುರ್ಜೇವಾಲಾ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News