ಚಾಮರಾಜನಗರ: ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ; ಹಲವರ ವರ್ಗಾವಣೆ

Update: 2018-09-06 16:44 GMT

ಚಾಮರಾಜನಗರ,ಸೆ.6: ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‍ಪೆಕ್ಟರ್‍ಗಳ ವರ್ಗಾವಣೆಯಲ್ಲಿ ಭಾರಿ ಸರ್ಜರಿಯಾಗಿದ್ದು, ಬಹುತೇಕ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ಸಬ್ ಇನ್ಸ್ ಪೆಕ್ಟರ್ ಬಿ.ಎಸ್. ಶಿವರುದ್ರರವರನ್ನು ಮಂಡ್ಯ ಜಿಲ್ಲೆಯ ಹಲಗೂರು ಪೊಲೀಸ್ ಠಾಣೆಗೆ, ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಡಿ.ಕೆ.ಲತೇಶ್ ಕುಮಾರ್ ರವರನ್ನು ಗುಂಡ್ಲುಪೇಟೆ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ, ಬೇಗೂರು ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಎಲ್.ಎನ್. ಕಿರಣ್ ಕುಮಾರ್, ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಗೆ, ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಲೋಹಿತ್ ಕುಮಾರ್ ಬೇಗೂರು ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. 

ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಎಸ್.ಎಲ್ ಸಾಗರ್ ರವರು ಹಾಸನ ಜಿಲ್ಲೆಯ ಕೋಣನೂರು ಪೊಲೀಸ್ ಠಾಣೆಗೆ, ನಂಜನಗೂಡು ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಸಿ. ವೀರಭದ್ರಪ್ಪ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ವಿಭಾಗಕ್ಕೆ, ಚಾಮರಾಜನಗರ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಉಮಾವತಿ ಮಂಡ್ಯ ಜಿಲ್ಲೆಯ ಬೆಳವಾಡಿ ಪೊಲೀಸ್ ಠಾಣೆಗೆ, ಮೈಸೂರು ಜಿಲ್ಲೆಯ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಚಾಮರಾಜನಗರ ಪೂರ್ವ (ರಾಮಸಮುದ್ರ) ಠಾಣೆಗೆ, ರಾಮಸಮುದ್ರ ಪೊಲೀಸ್ ಠಾಣೆಯಲ್ಲಿದ್ದ ಆನಂದೇಗೌಡರವರನ್ನು ಕೊಡಗು ಜಿಲ್ಲೆಯ ಸಿದ್ದಾಪುರ ಠಾಣೆಗೆ, ತೆರಕಣಾಂಬಿ ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ರವಿಕಿರಣ್ ರವರನ್ನು ಮಂಡ್ಯ ಜಿಲ್ಲೆಯ ನಾಗಮಂಗಲ ಟೌನ್ ಠಾಣೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News