ಕೊಡಗು ಪರಿಸ್ಥಿತಿ: ಜಿಲ್ಲಾ ಉಸ್ತುವಾರಿ ಸಚಿವರಿಂದ ಮಾಹಿತಿ ಪಡೆದ ಸಿ.ಎಂ

Update: 2018-09-06 17:54 GMT

ಬೆಂಗಳೂರು,ಸೆ.6: ಮುಖ್ಯಮಂತ್ರಿಗಳು ಕೊಡಗಿನ ಪರಿಸ್ಥಿತಿ ಹಾಗೂ ಪುನರ್ವಸತಿ ಸಮೀಕ್ಷೆ ಕುರಿತು ಸಚಿವ ಸಾ.ರಾ.ಮಹೇಶ್ ಅವರೊಂದಿಗೆ ಚರ್ಚೆ ನಡೆಸಿದರು. 

ಸಚಿವರು ಹಾನಿಗೊಳಗಾಗಿರುವ ಮನೆಗಳ ವಿವರ ನೀಡಿದರು. 'ಲೋಕೋಪಯೋಗಿ ಇಲಾಖೆಯು ರಸ್ತೆ ಸಂಪರ್ಕ ಸರಿಪಡಿಸಲು ತುರ್ತು ಕ್ರಮಗಳನ್ನು ಕೈಗೊಂಡಿದೆ. ಪ್ರಮುಖ ರಸ್ತೆಗಳನ್ನು ದುರಸ್ತಿ ಮಾಡಿ ಸಾರ್ವಜನಿಕ ಸಂಪರ್ಕಕ್ಕೆ ಮುಕ್ತಗೊಳಿಸಲಾಗಿದೆ. ಜನಜೀವನ ನಿಧಾನವಾಗಿ ಸಹಜಸ್ಥಿತಿಗೆ ಮರಳುತ್ತಿದ್ದು, ಶಾಲಾ ಕಾಲೇಜುಗಳು ಪ್ರಾರಂಭವಾಗುತ್ತಿದೆ. ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. ನಿರಾಶ್ರಿತರ ಕೇಂದ್ರದಲ್ಲಿರುವ ಲೋಪದೋಷಗಳನ್ನು ಸರಿಪಡಿಸಿ ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News