ಕಸಬ ಬೆಂಗರೆ ರಸ್ತೆ ಅವ್ಯವಸ್ಥೆ ವಿರುದ್ಧ ಡಿವೈಎಫ್‌ಐ ಪ್ರತಿಭಟನೆ

Update: 2018-09-07 06:20 GMT

ಮಂಗಳೂರು, ಸೆ.7: ಕಸಬ ಬೆಂಗರೆ ರಸ್ತೆ ಅವ್ಯವಸ್ಥೆಯನ್ನು ಖಂಡಿಸಿ, ಇದನ್ನು ಕೂಡಲೇ ದುರಸ್ತಿಪಡಿಸುವಂತೆ ಒತ್ತಾಯಿಸಿ ಡಿವೈಎಫ್‌ಐ ಬೆಂಗರೆ ಗ್ರಾಮ ಸಮಿತಿಯ ವತಿಯಿಂದ ಇಂದು ರಸ್ತೆ ತಡೆ, ಪ್ರತಿಭಟನೆ ನಡೆಸಲಾಯಿತು.

ಡಿವೈಎಫ್‌ಐ ದ.ಕ. ಜಿಲ್ಲಾ ಅಧ್ಯಕ್ಷ ಬಿ.ಕೆ.ಇಮ್ತಿಯಾಝ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನಾದುರಸ್ತಿಯಲ್ಲಿರುವ ಬೆಂಗರೆ ಮುಖ್ಯರಸ್ತೆ ಹಾಗೂ ಒಳರಸ್ತೆಗಳಿಗೆ ಶೀಘ್ರ ಡಾಮರು ಹಾಕಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News