ಕಳ್ಳನೆಂಬ ಶಂಕೆಯಲ್ಲಿ ಯುವಕನನ್ನು ಥಳಿಸಿ ಕೊಂದ ಗುಂಪು

Update: 2018-09-07 09:47 GMT

ಜಾರ್ಖಂಡ್, ಸೆ.7: ಕಳ್ಳ ಎಂಬ ಶಂಕೆಯಲ್ಲಿ ಗುಂಪೊಂದು 26 ವರ್ಷದ ಯುವಕನನ್ನು ಥಳಿಸಿ ಕೊಂದಿರುವ ಘಟನೆ ಜಾರ್ಖಂಡ್ ನ ಪಲಾಮು ಜಿಲ್ಲೆಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಮೂವರು ಗೆಳೆಯರು ಇಲ್ಲಿನ ತಿಸಿಬಾರ್ ಗ್ರಾಮದಲ್ಲಿರುವ ಮನೆಯೊಂದಕ್ಕೆ ತೆರಳಿದ್ದರು. ಆದರೆ ಇವರು ಕಳ್ಳರೆಂಬ ವದಂತಿ ಹಬ್ಬಿದ್ದು ಗುಂಪೊಂದು ಅವರನ್ನು ಮನೆಯಿಂದ ಹೊರಗೆಳೆದು ಹಿಗ್ಗಾಮುಗ್ಗಾ ಥಳಿಸಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ ಪೊಲೀಸರು ಗುಂಪು ಚದುರಿಸಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸಲು ಗಾಳಿಯಲ್ಲಿ ಗುಂಡನ್ನೂ ಹಾರಿಸಲಾಯಿತು ಎನ್ನಲಾಗಿದೆ. ಕೂಡಲೇ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಒಬ್ಬರು ಮೃತಪಟ್ಟರು.

ಘಟನೆಗೆ ಸಂಬಂಧಿಸಿ ಮೂವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News